ಮೈಸೂರು-ಮಾಣಿ ರಾಜ್ಯ ಹೆದ್ದಾರಿಯ ವಿಸ್ತರಣಾ ಕಾರ್ಯ ಕೆಲ ತಿಂಗಳುಗಳಿಂದ ನಡೆಯುತ್ತಿದೆ. ಆದರೆ ಈ ಕಾಮಗಾರಿಯು ಅವ್ಯವಸ್ಥೆಯ ಆಗರವಾಗಿದೆ.
ಪುತ್ತೂರು ಬೈ-ಪಾಸ್ ಮೂಲಕ ಹಾದು ಹೋಗುವ ಈ ರಸ್ತೆಯ ಕಾಮಗಾರಿ ನಡೆಯುತ್ತಿರುವ ಸ್ಥಳಗಳಲ್ಲಿ, ಕೆಲವೆಡೆ ಎಚ್ಚರಿಕೆಯ ಫಲಕಗಳು ಇದ್ದರೆ,ಇನ್ನೂ ಕೆಲವೆಡೆ ಇದು ಮಾಯವಾಗಿದೆ. ದಿನನಿತ್ಯ ಸಾವಿರಾರು ವಾಹನಗಳು ಹಾದು ಹೋಗುವ ಇಲ್ಲಿ ಸೂಚನಾ ಫಲಕಗಳನ್ನು ಸರಿಯಾಗಿ ಅಳವಡಿಸದೆ ಇರುವುದು ಕಾಮಗಾರಿಯ ಬೇಜವಾಬ್ದಾರಿತನಕ್ಕೆ ಸಾಕ್ಷಿಯಾಗಿದೆ.
-ಪ್ರತಿನಿಧಿ
No comments:
Post a Comment